ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) (ಆಗ್ನಿವೀರ) ಯೋಧ ಮಂಗಳವಾರ ಮುಂಜಾನೆ ಪಂಜಾಬ್ ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೇಶ ಸೇವೆ ಮಾಡುವ ಕನಸು ಹೊತ್ತಿದ್ದ ಕಿರಣರಾಜ್ ಸೇನೆಗೆ ನೇಮಕಗೊಂಡು ಒಂದೇ ವರ್ಷದಲ್ಲಿ ಅಕಾಲಿಕ ನಿಧನ ಹೊಂದಿರುವುದು ಅವರ ಕುಟುಂಬಸ್ಥರಿಗೆ ಮತ್ತು ಇಡೀ ಗ್ರಾಮಸ್ಥರಿಗೆ ತೀವ್ರ ಅಘಾತ ಉಂಟುಮಾಡಿದೆ.
ಇತರೆ ಸುದ್ದಿಗಳು