ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಗಿ ಕಟಾವು ಯಂತ್ರ ಬಾಡಿಗೆಗೆ ಕೊರಟಗೆರೆಯಲ್ಲಿ ರೂ. 2,700 ನಿಗದಿ
ವರದಿಗಾರರು : ಸುರೇಶ | ಸ್ಥಳ : ತುಮಕೂರು | ದಿನಾಂಕ : 21-11-2025

ರಾಗಿ ಕಟಾವು ಯಂತ್ರ ಬಾಡಿಗೆಗೆ ಕೊರಟಗೆರೆಯಲ್ಲಿ ರೂ. 2,700 ನಿಗದಿ

ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಗಳ ಬಾಡಿಗೆ ದರವನ್ನು ಪ್ರತಿ ಗಂಟೆಗೆ ರೂ. 2,700 ಎಂದು ನಿಗದಿಪಡಿಸಲಾಗಿದ್ದು, ಇದಕ್ಕಿಂತ ಹೆಚ್ಚಾಗಿ ಹಣ ಬೇಡಿಕೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ–2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಕೆ. ಸ್ಪಷ್ಟಪಡಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ಕಟಾವು ಯಂತ್ರ ಮಾಲೀಕರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. 2025–26ರ ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಲ್ಲಿ 12,180 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ನಡೆದಿದ್ದು, ಕಳೆದ ವರ್ಷದ ಹೊಲಿಕೆಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಿಂದ 3000 ಹೆಕ್ಟೇರ್ ಹೆಚ್ಚು ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಇದೀಗ ರಾಗಿ ಕಟಾವು ಹಂತ ತಲುಪಿರುವುದರಿಂದ ಬಳ್ಳಾರಿ ಜಿಲ್ಲೆಯಿಂದ 15–20 ಕಟಾವು ಯಂತ್ರಗಳು ತಾಲ್ಲೂಕಿಗೆ ಆಗಮಿಸಿರುವುದಾಗಿ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 11ರಂದು ನಡೆದ ಸಭೆಯಲ್ಲಿ ಕಟಾವು ಯಂತ್ರಗಳ ಬಾಡಿಗೆ ದರ ಅಂತಿಮಗೊಳಿಸಲಾಗಿರುವುದಾಗಿ ಅವರು ತಿಳಿಸಿದರು. ನಿಗದಿಪಡಿಸಿದ ದರವನ್ನು ಮಾತ್ರ ರೈತರಿಂದ ವಸೂಲಿಸಬೇಕು ಎಂದು ಯಂತ್ರ ಮಾಲೀಕರು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಯಿತು. ಸಹಾಯಕ ಕೃಷಿ ನಿರ್ದೇಶಕ ಎಂ. ಆರ್. ರುದ್ರಪ್ಪ ಮಾತನಾಡಿ, ಟ್ರ್ಯಾಕ್ಟರ್ ಚಾಲಿತ ಕಟಾವು ಯಂತ್ರಗಳಿಗೆ ರೂ. 2,400 ಬಾಡಿಗೆ ಹಾಗೂ ರಾಗಿ ಕಂತೆ ಮಾಡಲು ಬಳಸುವ ಬೇಲರ್‌ಗಳಿಗೆ ಪ್ರತಿ ಕಂತೆಗೆ ರೂ. 25 ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ನಿಗದಿತ ದರಕ್ಕಿಂತ ಹೆಚ್ಚಾಗಿ ಹಣ ವಸೂಲಿ ಮಾಡಿದರೆ, ಹತ್ತಿರದ ರೈತ ಸಂಪರ್ಕ ಕೇಂದ್ರ, ಕಂದಾಯ ಇಲಾಖೆ ಅಥವಾ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ರೈತರಿಗೆ ಕರೆ ನೀಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ನರಸಿಂಹಮೂರ್ತಿ, ನಾಗರಾಜು, ವೆಂಕಟೇಶ್, ರೈತ ಮುಖಂಡರು ಹಾಗೂ ಕಟಾವು ಯಂತ್ರ ಮಾಲೀಕರು ಹಾಜರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+