ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ಕನಿಷ್ಠ ವೇತನ ₹42,000 ಆಗಿಸಬೇಕು – ನವೆಂಬರ್ 27ರಂದು ಎಐಸಿಸಿಟಿಯು ರಾಜ್ಯವ್ಯಾಪಿ ಪ್ರತಿಭಟನೆ”
ವರದಿಗಾರರು : ಅಜಯ್ ಚೌಧರಿ | ಸ್ಥಳ : ರಾಯಚೂರು | ದಿನಾಂಕ : 17-11-2025

“ಕನಿಷ್ಠ ವೇತನ ₹42,000 ಆಗಿಸಬೇಕು – ನವೆಂಬರ್ 27ರಂದು ಎಐಸಿಸಿಟಿಯು ರಾಜ್ಯವ್ಯಾಪಿ ಪ್ರತಿಭಟನೆ”

ರಾಯಚೂರು:ಕಾರ್ಮಿಕರಿಗೆ 42 ಸಾವಿರ ಕನಿಷ್ಟ ವೇತನ ನೀಡಬೇಕು,ಗುತ್ತಿಗೆ ಪದ್ದತಿ ರದ್ದು ಮಾಡಿ ಕಾಯಂಗೊಳಿಸಬೇಕು ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ನವೆಂಬರ್ 27 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿ ಕೃಷ್ಣನ್ ತಿಳಿಸಿದರು.

ಅವರಿಂದು ಮಾಧ್ಯಮ ಗೋಷ್ಠಿ ಯಲ್ಲಿ ಮಾತನಾಡಿ, ದಿನದಿಂದ ದಿನಕ್ಕೆ ಕಾರ್ಮಿಕ ವರ್ಗದ ಮೇಲೆ ಅನ್ಯಾಯ ಹೆಚ್ಚಾಗುತ್ತಿದೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ. ಕೇಂದ್ರ ಸರಕಾರದ ಬದಲು, ರಾಜ್ಯ ಸರಕಾರಗಳು ಈ ಕಾನೂನು ಬದಲಾವಣೆಯಲ್ಲಿ ತೊಡಗಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಲವಾರು ಕಾನೂನುಗಳನ್ನು ಈಗಾಗಲೇ ಬದಲಾಯಿಸಲಾಗಿದೆ. ಉಳಿದ ರಾಜ್ಯಗಳು ಇದಕ್ಕೆ ಹೊರತಾಗಿಲ್ಲ. ಹಾಲಿ ಕಾರ್ಮಿಕ ಕಾನೂನುಗಳನ್ನು ನೇರವಾಗಿ ಉಲ್ಲಂಘಿಸಿ, ಕಾರ್ಪೊರೇಟ್ ಬಂಡವಾಳಕ್ಕೆ ಹಾಗೂ ಗುತ್ತಿಗೆ ಕಾರ್ಮಿಕ ಪದ್ಧತಿಗೆ ಭಾರಿ ಉತ್ತೇಜನ ನೀಡಲಾಗುತ್ತಿದೆ ದೇಶದಲ್ಲಿ ಶೇ.90ರಷ್ಟು ಕಾರ್ಮಿಕರು ಕನಿಷ್ಠ ವೇತನ ಹಾಗೂ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ ಎಂದು ದೂರಿದರು.

ಕಾರ್ಮಿಕರು ಸಂಘ ಕಟ್ಟುವ, ದುಡಿಮೆಯ ಹಕ್ಕುಗಳ ರಕ್ಷಣೆಗಾಗಿ ಮುಷ್ಕರ ನಡೆಸುವ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ. “ಹೆಚ್ಚು ಕೂಲಿ ಕೇಳಿದರೆ ಕೆಲಸಕ್ಕೆ ಬರಬೇಡಿ ಎಂಬ ಬೆದರಿಕೆ ದೇಶಾದ್ಯಂತ ಕೇಳಿಬರುತ್ತಿದೆ. ಸರಕಾರಿ, ಅರೆ ಸರಕಾರಿ ಹಾಗೂ ಖಾಸಗೀ ಕ್ಷೇತ್ರದಲ್ಲೂ ಕಾರ್ಮಿಕರ ಹಕ್ಕುಗಳ ಹರಣ ಎಗ್ಗಿಲ್ಲದೇ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟ್ರೇಡ್ ಯೂನಿಯನ್ ಕಾಯ್ದೆ-1926, ಗುತ್ತಿಗೆ ಕಾರ್ಮಿಕ (ರದ್ದತಿ & ನಿಯಂತ್ರಣ) ಕಾಯ್ದೆ-1970, ಕಾರ್ಖಾನೆಗಳ ಕಾಯ್ದೆ- 1948, ಕೈಗಾರಿಕಾ ವಿವಾದ ಕಾಯ್ದೆ-1947, ಕನಿಷ್ಠ ವೇತನ ಕಾಯ್ದೆ-1948 ಮುಂತಾದವುಗಳಲ್ಲಿರುವ ಕಾರ್ಮಿಕರ ಪರವಾದ ಅಂಶಗಳನ್ನು ತೆಗೆದು ಹಾಕುವ ನಿರ್ಧಾರ ಮೋದಿ ಸರಕಾರದ್ದಾಗಿದೆ. ಮೋದಿ ಸರಕಾರದ ಈ ಕಾರ್ಮಿಕ ವಿರೋಧಿ ಕ್ರಮಕ್ಕೆ ಕಾಂಗ್ರೆಸ್ ಮುಂತಾದ ಪಕ್ಷಗಳು ಬೆಂಬಲ ಸೂಚಿಸಿವೆ. ಕಾರ್ಮಿಕ ವರ್ಗ ಹೋರಾಡಿ ಪಡೆದಿದ್ದ ಕಾರ್ಮಿಕ ಹಿತ ರಕ್ಷಣಾ ಕಾಯ್ದೆಗಳನ್ನು ಬದಲಾವಣೆ ಮಾಡಲಾಗಿದೆ.

ಗುತ್ತಿಗೆ ಪದ್ದತಿ ರದ್ದುಗೊಳಿಸುವ ಬದಲು ದೇಶದೆಲ್ಲೆಡೆ ಗುತ್ತಿಗೆ ಪದ್ಧತಿ ತಲೆ ಎತ್ತಿ ನಿಂತಿದೆ. ಸರಕಾರಿ, ಅರೆ ಸರಕಾರಿ ಹಾಗೂ ಖಾಸಗೀ ವಲಯಗಳಲ್ಲಿ ರಾಜಾರೋಷವಾಗಿ ಜಾರಿಯಲ್ಲಿಡಲಾಗಿದೆ. ಬಂದರು, ರೇಲ್ವೆ, ವಿಮಾನಯಾನ, ಸಾರಿಗೆ, ವಿದ್ಯುತ್ ಉತ್ಪಾದನೆ ಹಾಗೂ ಸರಬರಾಜು, ನೀರಾವರಿ ಹಾಗೂ ಕುಡಿಯುವ ನೀರು ಸರಬರಾಜು ಪೌರಸೇವಾ ಮುಂತಾದ ಕ್ಷೇತ್ರಗಳು ಖಾಸಗಿಕರಣಕ್ಕೆ ಒಳಗಾಗುತ್ತಿವೆ ಎಂದರು.

ಇಂದಿನ ದಿನಗಳಲ್ಲಿ ಬೆಲೆ ಏರಿಕೆ, ಬದುಕಿನ ವೆಚ್ಚ ಗಗನಕ್ಕೇರಿದೆ. ಬಾಡಿಗೆ, ಆಹಾರ ಮತ್ತು ದಿನನಿತ್ಯದ ಖರ್ಚಿನ ಭಾರ ಹೆಚ್ಚಿದೆ. ಕಾರ್ಮಿಕರಿಗೆ ರೂ. 42,000ಕ್ಕಿಂತ ಕಡಿಮೆ ವೇತನದಲ್ಲಿ ಬದುಕುವುದು ಅಸಾಧ್ಯವಾಗಿದೆ. ಕಾರ್ಮಿಕರು ಮಾನವೀಯ ಗೌರವದೊಂದಿಗೆ ಬದುಕಲು ಸಾಧ್ಯವಾಗುವಂತೆ ಕನಿಷ್ಠ ವೇತನವನ್ನು ತಕ್ಷಣವೇ ಪರಿಷ್ಕರಿಸಿ ಹೆಚ್ಚಿಸಬೇಕು. ಕಾರ್ಮಿಕರ ಹಕ್ಕೊತ್ತಾಯಗಳು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 27 ರಂದು ಬೆಂಗಳೂರಿನಲ್ಲಿ ನಡೆಯುವ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಈ ಕರೆ ನೀಡಿದರು.

ಈ ಸಂದರ್ಭದಲ್ಲಿ: ಅಜೀಜ್ ಜಾಗೀರ್ದಾರ್ ಜಿಲ್ಲಾಧ್ಯಕ್ಷರು ಜಿಲಾನಿ ಪಾಷಾ, ವೆಂಕಟೇಶ್ , ಚಾಂದ್ ಪಾಷಾ ಕಾರ್ಮಿಕ ಮುಖಂಡರು ಮುಂತಾದವರುಉಪಸ್ಥಿತರಿದ್ದರು

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+