ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 03-06-2025

18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌!

ಅಹಮದಾಬಾದ್‌: ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್‌ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ.

2009, 2011, 2016ರ ಫೈನಲ್‌ ಪಂದ್ಯಗಳಲ್ಲಿ ಸೋತು ಭಾರೀ ನಿರಾಸೆ ಅನುಭವಿಸಿದ್ದ ಆರ್‌ಸಿಬಿ 4ನೇ ಬಾರಿ ಫೈನಲ್ ಕಂಟಕದಿಂದ ಮುಕ್ತಿ ಪಡೆದಿದೆ. ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ಸಂಘಟಿತ ಪ್ರದರ್ಶನ ನೀಡಿ, ಪಂಜಾಬ್‌ ಕಿಂಗ್ಸ್ ತಂಡವನ್ನು ಮಣಿಸಿ, ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. 4ನೇ ಪ್ರಯತ್ನದಲ್ಲಿ ಯಶಸ್ವಿಯಾಗಿ ಟ್ರೋಫಿ ಎತ್ತುವಲ್ಲಿ ಸಫಲವಾದ ಆರ್‌ಸಿಬಿ ರಜತ್‌ ಪಾಟಿದಾರ್‌ ನಾಯಕತ್ವದಲ್ಲಿ ಐಪಿಎಲ್‌ (IPL 2025) ಇತಿಹಾಸ ಪುಟ ಸೇರಿದೆ.

191 ರನ್‌ಗಳ ಬೃಹತ್‌ ಟಾರ್ಗೆಟ್‌ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌ ಶುಭಾರಂಭವನ್ನೇ ಪಡೆದಿತ್ತು. ಮೊದಲ ವಿಕೆಟ್‌ಗೆ 5 ಓವರ್‌ಗಳಲ್ಲಿ 43 ರನ್‌ಗಳ ಜೊತೆಯಾಟ ನೀಡಿತ್ತು, ಪವರ್‌ ಪ್ಲೇ ಮುಗಿಯುತ್ತಿದ್ದಂತೆ ರನ್‌ ವೇಗ ಕಡಿತಗೊಂಡಿತು. ಈ ನಡುವೆ ಪ್ರಭ್‌ ಸಿಮ್ರನ್‌, ಶ್ರೇಯಸ್‌ ಅಯ್ಯರ್‌ ಅವರ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಆರ್‌ಸಿಬಿ ಗೆಲುವಿಗೆ ಪುಷ್ಠಿ ನೀಡಿತು. ಕೊನೆಯಲ್ಲಿ ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟ ಕೂಡ ವ್ಯರ್ಥವಾಯಿತು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌, ಕೃನಾಲ್‌ ಪಾಂಡ್ಯ ತಲಾ 2 ವಿಕೆಟ್‌, ಯಶ್‌ ದಯಾಳ್‌, ಜೋಶ್‌ ಹೇಜಲ್ವುಡ್‌, ರೊಮಾರಿಯೊ ಶೆಫರ್ಡ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ, 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 191 ರನ್‌ ಕಲೆಹಾಕಿತ್ತು. ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿ ಪವರ್‌ ಪ್ಲೇನಲ್ಲಿ ಫಿಲ್‌ ಸಾಲ್ಟ್‌ ಅವರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್‌ ಶುರು ಮಾಡಿತು. ಅಲ್ಲದೇ ಒಂದೆಡೆ ರನ್‌ ಕಲೆಹಾಕುತ್ತಿದ್ದ ಆರ್‌ಸಿಬಿ ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಾಗುತ್ತಿತ್ತು.

ಮೊದಲ ವಿಕೆಟ್‌ಗೆ ಸಾಲ್ಟ್‌ – ಕೊಹ್ಲಿ ಜೋಡಿ 18 ರನ್‌, 2ನೇ ವಿಕೆಟ್‌ಗೆ ಮಯಾಂಕ್‌ ಅಗರ್ವಾಲ್‌ 38 ರನ್‌, 3ನೇ ವಿಕೆಟಿಗೆ ಕೊಹ್ಲಿ-ರಜತ್‌ ಪಾಟಿದಾರ್‌ ಜೋಡಿ 27 ಎಸೆತಗಳಲ್ಲಿ ಸ್ಫೋಟಕ 40 ರನ್‌, 4ನೇ ವಿಕೆಟಿಗೆ ಕೊಹ್ಲಿ-ಲಿವಿಂಗ್‌ಸ್ಟೋನ್‌ ಜೋಡಿ 35 ರನ್‌ ಜೊತೆಯಾಟ ನೀಡಿತ್ತು. ಆದ್ರೆ 6ನೇ ವಿಕೆಟಿಗೆ ಜಿತೇಶ್‌ ಶರ್ಮಾ ಹಾಗೂ ಲಿವಿಂಗ್‌ಸ್ಟೋನ್‌ ಜೋಡಿ 12 ಎಸೆತಗಳಲ್ಲಿ ಸ್ಫೋಟಕ 36 ರನ್‌ ಜೊತೆಯಾಟ ನೀಡಿತ್ತು. ಇವರಿಬ್ಬರ ಸಿಕ್ಸರ್‌, ಬೌಂಡರಿ ಆಟ ಕೂಡ ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಆದರೆ ಇವರಿಬ್ಬರ ಆಟಕ್ಕೂ ಪಂಜಾಬ್‌ ಬೌಲರ್‌ಗಳು ಬ್ರೇಕ್‌ ಹಾಕಿದ್ರು.

ಕೈಲ್‌ ಜೆಮಿಸನ್‌ ಬೌಲಿಂಗ್‌ ವೇಳೆ ಲಿವಿಂಗ್‌ಸ್ಟೋನ್‌ ಎಲ್‌ಬಿಡಬ್ಲ್ಯೂಗೆ ಪೆವಿಲಿಯನ್‌ಗೆ ತುತ್ತಾಗಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ ಕನ್ನಡಿಗ ವಿಜಯ್‌ ಕುಮಾರ್‌ ವೈಶಾಕ್‌ನ ಮಾರಕ ದಾಳಿಗೆ ಜಿತೇಶ್‌ ಶರ್ಮಾ ಕ್ಲೀನ್‌ ಬೌಲ್ಡ್‌ ಆಗಿ ಹೊರ ನಡೆದರು. ಇದು ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ಕನಸಿಗೆ ಭಾರೀ ಹೊಡೆತ ನೀಡಿತು. ಕೊನೆಯಲ್ಲಿ ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ ನಿರೀಕ್ಷಿತ ಪ್ರದರ್ಶನ ನೀಡದ ಪರಿಣಾಮ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 190 ರನ್‌ ಗಳಿಸಿತು.

ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌, ಕೈಲ್‌ ಜೆಮಿಸನ್‌ ತಲಾ ಮೂರು ವಿಕೆಟ್‌ ಕಿತ್ತರೆ, ಅಜ್ಮತುತ್ತ ಒಮರ್ಝೈ, ವಿಜಯ್‌ ಕುಮಾರ್‌ ವೈಶಾಕ್‌, ಚಹಲ್‌ ತಲಾ ಒಂದು ವಿಕೆಟ್‌ ಕಿತ್ತರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+