ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಜೆಡಿಎಸ್ ಮುಖಂಡರ ಹತ್ಯಾ ಯತ್ನ ಪ್ರಕರಣ—ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ
ವರದಿಗಾರರು : ದರ್ಶನ್ ಎಂ. ಎನ್ | ಸ್ಥಳ : ದಾವಣಗೆರೆ | ದಿನಾಂಕ : 24-11-2025

ದಾವಣಗೆರೆ: ಜೆಡಿಎಸ್ ಮುಖಂಡರ ಹತ್ಯಾ ಯತ್ನ ಪ್ರಕರಣ—ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ

ದಾವಣಗೆರೆ: ಜೆಡಿಎಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಟಿ. ಅಸ್ಗರ್ ಅವರ ಮೇಲೆ ನಡೆದಿದ್ದ ಹತ್ಯಾ ಯತ್ನ ಪ್ರಕರಣದಲ್ಲಿ ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಹಾಗೂ ನಟಿ ಸವಿತಾ ಮಲ್ಲೇಶ್ ನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ನಾಯಕಿಯಾದ ಸವಿತಾ ನಾಯ್ಕ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಯತ್ನದಲ್ಲಿ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಖಾಲಿದ್ ಪೈಲ್ವಾನ್‌ಗೆ ಆಶ್ರಯ ಮತ್ತು ಹಣಕಾಸಿನ ನೆರವು ನೀಡಿದ್ದುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ನವೆಂಬರ್ 10ರಂದು ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಜೆಡಿಎಸ್ ಮುಖಂಡ ಟಿ. ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲಿದ್ ಪೈಲ್ವಾನ್ ಚಾಕುವಿನಿಂದ ದಾಳಿ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅಸ್ಗರ್ ಸಮಯಕ್ಕೆ ಚಿಕಿತ್ಸೆ ದೊರೆತ ಕಾರಣ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ದಾಳಿಕೋರನಾದ ಖಾಲಿದ್ ಪೈಲ್ವಾನ್ ಸಧ್ಯ ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಸವಿತಾ ಮಲ್ಲೇಶ್ ನಾಯ್ಕ್ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿದ್ದರೂ ನೀಡದ ಹಿನ್ನೆಲೆ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ ಪುನಃ ಕಾಂಗ್ರೆಸ್‌ಗೆ ಮರಳಿದ್ದ ಅವರು ಪಕ್ಷದ ವಿವಿಧ ಕಾರ್ಯಕ್ರಮಗಳು, ಸಭೆ, ಪ್ರತಿಭಟನೆಗಳಲ್ಲಿ ಸಕ್ರಿಯರಾಗಿದ್ದರೆಂದು ಮೂಲಗಳು ತಿಳಿಸಿವೆ.

ಅವರ ವಿರುದ್ಧ ದಾಖಲಾದ ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಕೊಂಡಿದ್ದು, ಅವರು ಇದೀಗ ಜೈಲಿನಲ್ಲಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+