ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ ಎಸ್ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾಲು ಸಾಲು ದೂರುಗಳು!
ವರದಿಗಾರರು : ದರ್ಶನ್ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 12-01-2026

ದಾವಣಗೆರೆ ಎಸ್ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾಲು ಸಾಲು ದೂರುಗಳು!

ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು ಫೋನ್‌ ಇನ್‌ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು

)ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯೊಬ್ಬರು ಕರೆ ಮಾಡಿ ಮಾತನಾಡಿದರು. ದಾವಣಗೆರೆ ನಗರದ ಅನುಭವ ಮಂಟಪ ಶಾಲೆ -ಕಾಲೇಜು, ಕಾಲೇಜುಗಳ ಹತ್ತಿರ ಕೆಲವು ಯುವಕರು ಕಾರುಗಳಲ್ಲಿ ಕುಳಿತುಕೊಂಡು ರಾತ್ರಿ 9 ಗಂಟೆಯಿಂದ ಡ್ರಿಂಕ್ಸ್ ಮಾಡುತ್ತಾರೆ. ಕಾರಿನಲ್ಲಿ ಕುಳಿತುಕೊಂಡು ಫುಡ್ ಆರ್ಡರ್ ಮಾಡಿ ತಿನ್ನುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಭಾಗದಲ್ಲಿ ಕೆಲವು ಹುಡುಗ ಹುಡುಗಿಯರು ಅನೈತಿಕ ಚಟುವಟಿಕೆಗಳು ಕೂಡ ಮಾಡುತ್ತಾರೆ ಎಂದು ದೂರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಉಮಾ ಪ್ರಶಾಂತ್ ಅವರು, ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ದಾವಣಗೆರೆ ನಗರದ ಕೆಬಿ ಬಡಾವಣೆ ವ್ಯಕ್ತಿಯೊಬ್ಬರು ಕರೆ ಮಾಡಿ ಮಾತನಾಡಿ ನನಗೆ ವಯಸ್ಸಾಗಿದೆ ನಾಲ್ಕು ಲಕ್ಷ ಹಣ ನೀಡಿದ್ದೇನೆ. ಒಬ್ಬ ವ್ಯಕ್ತಿ ಚೆಕ್ಕ್ಕು ಕೊಟ್ಟು ತೆಗೆದುಕೊಂಡು ಹೋಗಿದ್ದಾನೆ. ಆದರೆ ಈ ಹಣ ಇನ್ನು ವಾಪಸ್ಸು ಕೊಟ್ಟಿಲ್ಲ. ಈ ಸಮಸ್ಯೆಯನ್ನು ಪರಿಹಾರ ಮಾಡಕೊಡಬೇಕು ಎಂದು ಕೋರಿದರು. ಇದಕ್ಕೆ ಎಸ್ಪಿ ಅವರು,ಇದು ಸಿವಿಲ್ ವ್ಯಾಜ್ಯವಾಗಿರುತ್ತದೆ. ಆದರೂ ಕೂಡ ನೀವು ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಿಮಿನಲ್ ಪ್ರಕರಣವಾಗಿದ್ದರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ರಾಷ್ಟ್ರೋತ್ಥಾನ ಸ್ಕೂಲ್ ಮುಖ್ಯ ಗೇಟ್ ಹತ್ತಿರ ಹಾದು ಹೋಗುವ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಿ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಗಮನಕ್ಕೆ ತಂದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿಈ ಬಗ್ಗೆ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ದಾವಣಗೆರೆ ತಾಲೂಕು ಬಸವಾಪುರ ಗ್ರಾಮದ ನಿವಾಸಿಯೊಬ್ಬರು ಕರೆ ಮಾಡಿ ಮಾತನಾಡಿ ನಾನು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದಾಗ ದಾವಣಗೆರೆ ನಗರದ ಹದಡಿ ರಸ್ತೆಯ ಸರ್ ಎಂ ವಿ ಕಾಲೇಜು ಹತ್ತಿರ ಟ್ರಾಫಿಕ್ ಪೊಲೀಸರು ನನ್ನ ಗಾಡಿಯನ್ನು ಹಿಡಿದು ಫೈನ್ ಹಾಕಿದರು. ನಾನು ನಂತರ ಫೈನ್ ಅಮೌಂಟ್ ಅನ್ನು ಕಟ್ಟುವುದಾಗಿ ತಿಳಿಸಿದಾಗ ವೈಯಕ್ತಿಕವಾಗಿ ನಿನಗೆ ಯೋಗ್ಯತೆ ಇಲ್ಲ ಎಂದು ನಿಂದನೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ಎಂದು ನೊಂದು ನುಡಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ: ಈ ಬಗ್ಗೆ ಸದರಿ ಪೊಲೀಸ್ ಸಿಬ್ಬಂದಿಗಳ ಮೇಲೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ದಾವಣಗೆರೆ ನಗರನಿವಾಸಿ ಕರೆ ಮಾಡಿ ಮಾತನಾಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ420 ಕಲಂ ಅಡಿ ಕಂಪ್ಲೇಂಟ್ ಆಗಿದೆ. ಕೋರ್ಟ್ ನಿಂದ ಸಮನ್ಸ್ ಬಂದರೂ ಕೂಡಾ ಪೊಲೀಸರು ಅಪರಾಧಿಗೆ ಸಮನ್ಸ್ ಜಾರಿ ಮಾಡುತ್ತಿಲ್ಲ ಎಂದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿರುತ್ತಾರೆ.

ದಾವಣಗೆರೆ ನಗರದ ರಾಜೀವ್ ಗಾಂಧಿ ಬಡಾವಣೆ ನಿವಾಸಿ ಮಹಿಳೆ ಕರೆ ಮಾಡಿ ಮಾತನಾಡಿ ನಗರದ ವಿಜಯನಗರ ಬಡಾವಣೆಯಲ್ಲಿ 30 * 40 ಸೈಟ್ ಇದೆ. ಯಾರೋ ಬಂದು ಈ ಸೈಟಿಗೆ ಬೋರ್ಡ್ ಹಾಕಿದ್ದಾನೆ. ಕರೆ ಮಾಡಿ ಸೆಟಲ್‌ಮೆಂಟ್ ಮಾಡಿಕೊಳ್ಳೋಣ ಎಂದು ಬೆದರಿಕೆ ಹಾಕುತ್ತಿದ್ದಾನೆ. ಈ ಬಗ್ಗೆ ದಿನಾಂಕ 05/01/2026 ರಂದು ದಾವಣಗೆರೆ ಎಸ್ಪಿ ಕಚೇರಿಯ ಟಪಾಲ್ ಗೆ ಅರ್ಜಿ ನೀಡಿದ್ದೇವೆ ಎಂದು ಹೇಳಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ: ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಪೊಲೀಸ್ ಠಾಣೆಗೆ ದೂರು ನೀಡಿ. ನಾನು ಮಾತನಾಡುತ್ತೇನೆ ಎಂದರು.

ಫೋನ್ ಇನ್ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಡಿಪಿಒ ಡಿಎಸ್ ಬಿ ಪಿಐ ಕಿರಣ್‌ ಕುಮಾರ್, ಪೊಲೀಸ್ ಇನ್ ಸ್ಪೆಕ್ಟರ್ ಲಿಂಗನಗೌಡ ನೆಗಳೂರು, ರವೀಂದ್ರ ಕಾಲಭೈರವ ಮತ್ತಿತರರು ಹಾಜರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+