ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗಂಗಾವತಿ ಪಟುಗಳ ಕ್ರೀಡಾ ಕಾವ್ಯ : ಬೇತಲ್ ಪ.ಪೂ. ಕಾಲೇಜಿನ ಚಿನ್ನದ ಪದ್ಯ”
ವರದಿಗಾರರು : ಬಸವರಾಜ್, | ಸ್ಥಳ : ಕೊಪ್ಪಳ | ದಿನಾಂಕ : 18-09-2025

ಗಂಗಾವತಿ ಪಟುಗಳ ಕ್ರೀಡಾ ಕಾವ್ಯ : ಬೇತಲ್ ಪ.ಪೂ. ಕಾಲೇಜಿನ ಚಿನ್ನದ ಪದ್ಯ”

100 ಪದಕಗಳ ದಿಗ್ಗಜ ಸಾಧನೆ : 10 ಕ್ರೀಡಾಪಟುಗಳ ತ್ರಿವಿಜಯ :: 30 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಲಗ್ಗೆ ಗಂಗಾವತಿ:-ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಶ್ರಯದಲ್ಲಿ ಹಾಗೂ ಶ್ರೀ ಎಚ್.ಆರ್. ಸರೋಜಮ್ಮ ಬಾಲಕಿಯರ ಪ.ಪೂ. ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಗಂಗಾವತಿಯ ಬೇತಲ್ ಸ್ವತಂತ್ರ ಪ.ಪೂ. ಕಾಲೇಜು ತನ್ನ ಅದ್ಭುತ ಸಾಧನೆಯಿಂದ ಎಲ್ಲರ ಗಮನ ಸೆಳೆದಿದೆ. ಒಟ್ಟಾರೆ 68 ಚಿನ್ನದ ಪದಕಗಳು ಹಾಗೂ 32 ಬೆಳ್ಳಿಯ ಪದಕಗಳನ್ನು ಕಲೆಹಾಕಿದ ಈ ಕಾಲೇಜು, ಜಿಲ್ಲೆಯ ಕ್ರೀಡಾಂಗಣದಲ್ಲಿ ತನ್ನ ಪ್ರಭಾವ ಬೀರಿದೆ. ವಿಶೇಷವಾಗಿ ಹತ್ತು ಮಂದಿ ವಿದ್ಯಾರ್ಥಿಗಳು ಒಂದೇ ವೇಳೆ ಮೂರು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಅಪರೂಪದ ಸಾಧನೆ ಮಾಡಿದ್ದು, ಈ ಮೂಲಕ ಕಾಲೇಜಿನ ಕೀರ್ತಿಗೆ ಹೊಸ ಮೆರುಗು ತಂದಿದ್ದಾರೆ.

ಕರಾಟೆ, ಕುಸ್ತಿ, ಜೂಡೋ, ಬಾಕ್ಸಿಂಗ್, ಟೆಕ್ವಾಂಡೋ, ಬೆಲ್ಟ್ ಕುಸ್ತಿ ಮತ್ತು ಈಜು ಕ್ರೀಡೆಗಳಲ್ಲಿ ಕಾಲೇಜಿನ ಕ್ರೀಡಾಪಟುಗಳು ಮಿಂಚಿ, 30 ಮಂದಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಲ್ಲಿ ಕಾವ್ಯ, ಶಂಶಾದ್ ಬೇಗಂ, ಸಂಜನಾ, ದ್ರಾಕ್ಷಾಯಿಣಿ, ಅಮೂಲ್ಯ, ರಂಜಿತಾ, ರೆಹಮಾನ್ ಬೀ, ಅಂಜನಾ, ಚೈತನ್ಯ, ಚಂದ್ರಿಕಾ, ಚೈತ್ರಾ, ಸಹನಾ, ಅಪೂರ್ವ, ತೇಜಸ್ವಿನಿ, ಆಫೀಜಾ, ಶ್ರವಣ್ ಕುಮಾರ್, ಸೂರ್ಯ, ಜಶ್ವಂತ್, ಚಂದ್ರಶೇಖರ್, ವಸಂತ್, ಪಾಮೇಶ್, ತುಳಸ್ ನಾಯ್ಕ್, ದುರ್ಗೇಶ್, ರಮೇಶ್ ಶಿವಾಜಿ, ಸಂಜಯ್, ವೈಭವ್, ಶರಣಬಸವ, ಮುಖೇಶ್ ಮುಂತಾದವರು ಸೇರಿದ್ದಾರೆ.

ಅಧ್ಯಕ್ಷ ರಾಜು ಸುಧಾಕರ್ ಅವರು, “ನಮ್ಮ ಕಾಲೇಜು ಕ್ರೀಡೆ ಕ್ಷೇತ್ರದಲ್ಲಿ ಇಂತಹ ದಿಗ್ಗಜ ಸಾಧನೆ ಮಾಡಿರುವುದು ಹೆಮ್ಮೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಾಗೂ ತರಬೇತುದಾರರ ಸಮರ್ಪಣೆಗೆ ಈ ಯಶಸ್ಸು ಸಾಕ್ಷಿ. ಮುಂದಿನ ದಿನಗಳಲ್ಲಿ ಇನ್ನಷ್ಟು ರಾಷ್ಟ್ರಮಟ್ಟ, ಅಂತರಾಷ್ಟ್ರಮಟ್ಟದ ವಿಜೇತರನ್ನು ನಮ್ಮ ಸಂಸ್ಥೆಯಿಂದ ತರಬೇಕೆಂಬುದು ನಮ್ಮ ಆಶಯ” ಎಂದು ಹರ್ಷ ವ್ಯಕ್ತಪಡಿಸಿದರು, ಮುಖ್ಯ ತರಬೇತುದಾರ ಬಾಬುಸಾಬ್ ತಮ್ಮ ಭಾವನೆ ವ್ಯಕ್ತಪಡಿಸುತ್ತಾ, “ವಿದ್ಯಾರ್ಥಿಗಳು ಪ್ರತಿದಿನ ಶ್ರಮಪಟ್ಟು ಅಭ್ಯಾಸ ಮಾಡಿದ ಪರಿಣಾಮವೇ ಇಂತಹ ಮಹತ್ವದ ಸಾಧನೆ ಸಾಧ್ಯವಾಗಿದೆ. ಪ್ರತಿ ಕ್ರೀಡಾಪಟುವಿನಲ್ಲೂ ಉತ್ಸಾಹ, ದೃಢನಿಶ್ಚಯ ಹಾಗೂ ಗೆಲುವಿನ ಹಂಬಲ ತುಂಬಿಕೊಂಡಿದೆ. ರಾಜ್ಯಮಟ್ಟದಲ್ಲಿಯೂ ಇದೇ ತೀವ್ರತೆಗೆ ತರಬೇತಿ ಪಡೆದು ಇನ್ನಷ್ಟು ಕೀರ್ತಿ ತರುವ ವಿಶ್ವಾಸವಿದೆ” ಎಂದು ಹೇಳಿದರು.

ಈ ಸಾಧನೆಯನ್ನು ಮೆಚ್ಚಿದ ಆಡಳಿತ ಮಂಡಳಿ ಅಧಿಕಾರಿ ಹೇಮಾ ಸುಧಾಕರ್,ಮತ್ತು ಬಿ ಸಿ ಐಗೋಳ್, ಅಧ್ಯಕ್ಷ ರಾಜು ಸುಧಾಕರ್, ಕಾರ್ಯದರ್ಶಿ ಬ್ಯಾಬೇಜ್ ಮಿಲ್ಟನ್, ಖಜಾಂಚಿ ಸುಜಾತಾ ರಾಜು, ಪ್ರಾಂಶುಪಾಲ ಬಿಂಗಿ ವೆಂಕಟೇಶ್, ಮುಖ್ಯ ತರಬೇತುದಾರ ಮತ್ತು ದೈಹಿಕ ಶಿಕ್ಷಕ ಬಾಬುಸಾಬ್ ಹಾಗೂ ದೈಹಿಕ ಶಿಕ್ಷಕಿ ಗೀತಾ ಕೊಳ್ಳಿ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದಲ್ಲಿಯೂ ಅದ್ಭುತ ಸಾಧನೆ ಮಾಡಲು ಶುಭ ಹಾರೈಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+