ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹುಣಸೂರು ತಹಸೀಲ್ದಾರ್ ಮಂಜುನಾಥ್ ಅವರ ಮುಂದಾಳತ್ವದಲ್ಲಿ ಬಿಳಿಗೆರೆ ಗ್ರಾಮದ ದಲಿತರಿಗೆ ದೇವಸ್ಥಾನಕ್ಕೆ ಮುಕ್ತ �
ವರದಿಗಾರರು : ಹುಣಸೂರು | ಸ್ಥಳ : ಹುಣಸೂರು | ದಿನಾಂಕ : 02-12-2025

ಹುಣಸೂರು ತಹಸೀಲ್ದಾರ್ ಮಂಜುನಾಥ್ ಅವರ ಮುಂದಾಳತ್ವದಲ್ಲಿ ಬಿಳಿಗೆರೆ ಗ್ರಾಮದ ದಲಿತರಿಗೆ ದೇವಸ್ಥಾನಕ್ಕೆ ಮುಕ್ತ �

ಗಾವಡಗೆರೆ ಹೋಬಳಿ ಬಿಳಿಗೆರೆ ಗ್ರಾಮದ ದಲಿತರಿಗೆ 14 ವರ್ಷಗಳ ಬಳಿಕ ದೇವಸ್ಥಾನ ಪ್ರವೇಶ ದೊರೆತಿದ್ದು, ಈ ಮಹತ್ವದ ಕ್ರಮಕ್ಕೆ ಹುಣಸೂರು ತಹಸೀಲ್ದಾರ್ ಮಂಜುನಾಥ್ ಅವರ ಮಧ್ಯಸ್ಥಿಕೆ ಕಾರಣವಾಯಿತು. 01-12-2025 ರಂದು ಸೋಮವಾರ, ದಲಿತರು ಮತ್ತು ಸವರ್ಣೀಯರು ಒಟ್ಟಾಗಿ ಮಲ್ಲೇಶ್ವರ ದೇವಾಲಯದಲ್ಲಿ ಪೂಜಾ ಕಾರ್ಯ ನಡೆಸುವ ಮೂಲಕ ಸಾಮಾಜಿಕ ಸೌಹಾರ್ದದ ನೂತನ ಅಧ್ಯಾಯ ಆರಂಭವಾಯಿತು. ಬಿಳಿಗೆರೆ ಗ್ರಾಮದ ಮುಜರಾಯಿ ಇಲಾಖೆಯಡಿ ಬರುವ ಈ ದೇವಾಲಯದಲ್ಲಿ ಕಳೆದ 14 ವರ್ಷಗಳಿಂದ ಪೂಜಾ ಕಾರ್ಯ ನಿಂತು ಹೋಗಿತ್ತು. ದಲಿತರು ‘ನಮಗೂ ಮುಕ್ತ ಪ್ರವೇಶ ದೊರಕಬೇಕು’ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೆಲವು ಸವರ್ಣೀಯರು ಪೂಜಾ ಕಾರ್ಯ ಮತ್ತು ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು. ದಲಿತರು ಮತ್ತು ದಸಂಸದ ಸಂಘಟನೆಯವರು ಇದಕ್ಕಾಗಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು.

ಈ ವಿಚಾರ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಂಜುನಾಥ್ ಅವರು ಇಬ್ಬರ ಸಮುದಾಯದ ಮುಖಂಡರನ್ನು ಪ್ರತ್ಯೇಕವಾಗಿ ಸಭೆಗೂಡಿ ಮಾತುಕತೆ ನಡೆಸಿ, ಸಮಸ್ಯೆಯನ್ನು ಮುಂದೂಡುವುದರಿಂದ ಗ್ರಾಮದಲ್ಲಿ ಸೌಹಾರ್ದ ಕಡಿಮೆಯಾಗುತಿದೆ ಎಂದು ತಿಳಿಸಿ ಸಮಾಧಾನಕ್ಕೆ ಕರೆನೀಡಿದರು. ಅವರ ನೊಂದ ಮನವಿಗೆ ಸ್ಪಂದಿಸಿದ ಸವರ್ಣೀಯ ಮುಖಂಡರು ದೇವಾಲಯಕ್ಕೆ ಸುಣ್ಣ-ಬಣ್ಣ ಹಚ್ಚಿ, ಪೂಜೆಗಾಗಿ ತಯಾರಿ ನಡೆಸಿದರು. ನಂತರ ಇಬ್ಬರೂ ಸಮುದಾಯದ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಸಂಘಟನಾ ಪ್ರತಿನಿಧಿಗಳ ಸಮ್ಮುಖದಲ್ಲಿ ದೇವಾಲಯದಲ್ಲಿ ಒಟ್ಟಾಗಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುನಿಯಪ್ಪ ಅವರು, “ದೇವಾಲಯದ ಸಮಸ್ಯೆ ಹಲವಾರು ವರ್ಷಗಳಿಂದ ಬಾಕಿಯಾಗಿತ್ತು. ಈಗ ಇಬ್ಬರ ಸಮುದಾಯದ ಸಮ್ಮತಿಯಿಂದ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಇದಕ್ಕೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು; ಅಗತ್ಯವಿದ್ದರೆ ರೌಡಿ ಶೀಟ್ ತೆರೆಯಲಾಗುವುದು,” ಎಂದು ಎಚ್ಚರಿಸಿದರು

ದಸಂಸದ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, “ಕಳೆದ 14 ವರ್ಷಗಳಿಂದ ದಲಿತರಿಗಾಗಿ ಹೋರಾಟ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಯದೆ ಉಳಿಯುತ್ತಿತ್ತು. ತಹಸೀಲ್ದಾರ್ ಮಂಜುನಾಥ್ ಅವರು ಕಾಳಜಿಯಿಂದ ಮುಂದಾಗಿ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿದ್ದಾರೆ,” ಎಂದು ಅಭಿನಂದಿಸಿದರು. ರೈತ ಸಂಘದ ಹೊಸೂರು ಕುಮಾರ್ ಮಾತನಾಡಿ, “ಅಸ್ಪೃಶ್ಯತೆ ಒಂದು ಮಾನಸಿಕ ರೋಗ. ಕಾನೂನಿನಿಂದ ಮಾತ್ರ ಪರಿಹಾರ ಸಾಧ್ಯವಿಲ್ಲ; ಜಾಗೃತಿ ಮತ್ತು ಸೌಹಾರ್ದವೇ ಮುಖ್ಯ. ಈ ಕೆಲಸವನ್ನು ತಹಸೀಲ್ದಾರ್ ಮಂಜುನಾಥ್ ಅವರು ಮಾಡಿದ್ದಾರೆ,” ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ಭರತ್, ಪಿಡಿಓ ಶೀಲಾ, ಕಾರ್ಯದರ್ಶಿ ಆನಂದ್, ರಾಜಸ್ವ ನಿರೀಕ್ಷಕ ಹೇಮಂತ್ ಕುಮಾರ್, ಗ್ರಾಮ ಆಡಳಿತಾಧಿಕಾರಿಗಳು, ಕುರುಬ ಮತ್ತು ದಲಿತ ಸಮುದಾಯದ ಯಜಮಾನರು, ವಿವಿಧ ಸಂಘಟನಾ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಾಲಯದ ಅರ್ಚಕರಾದ ಮಹದೇವಪ್ಪ ಮತ್ತು ಸುರೇಶ್ ಅವರು ತಹಸೀಲ್ದಾರ್ ಹಾಗೂ ಮುಖಂಡರ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಸಿ ಪ್ರಸಾದ ವಿತರಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+